ಆಸ್ಟ್ರೇಲಿಯಾ ಎಂದ ಕೂಡಲೇ ಒಂದೊಮ್ಮೆ ನೆನಪಿಗೆ ಬರುತ್ತಿದ್ದುದು ಕುರಿಗಳು, ಜಾನುವಾರುಗಳು, ಮತ್ತು ಕ್ರಿಕೆಟ್. ಇತ್ತೀಚೆಗೆ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಅವ್ಯಾಹತ ಹಲ್ಲೆ ಮತ್ತು ಕೊಲೆ ಆಸ್ಟ್ರೇಲಿಯನ್ನರ ಮತ್ತೊಂದು ರೂಪದ ಪರಿಚಯ ಮಾಡಿಕೊಡುತ್ತಿದೆ. ಭಾರತೀಯರ ವಿರುದ್ಧದ ಪ್ರತಿ ಆಕ್ರಮಣಕ್ಕೂ “ಜನಾಂಗ ಬೇಧ “ನೀತಿಯ ಅರ್ಥ ಕಲ್ಪಿಸಬೇಡಿ ಎಂದು ಅಲ್ಲಿನ ಮಂತ್ರಿ ಮಹೋದಯರ ಹೇಳಿಕೆ ಓದುತ್ತಿದ್ದಾಗಲೇ ಆಸ್ಟ್ರೇಲಿಯಾ ದೇಶದ ಮನಮೋಹಕ, ರಮಣೀಯ ಚಿತ್ರಗಳ ಬ್ಲಾಗ್ ಒಂದು ಕಣ್ಣಿಗೆ ಬಿತ್ತು. ತನ್ನದೇ ಸೃಷ್ಟಿಗಳಾದ ಮನುಷ್ಯನಲ್ಲಿ ಅಸಹನೆಯನ್ನೂ, ಕ್ರೌರ್ಯವನ್ನೂ, ಮತ್ತು ನಿಸರ್ಗದಲ್ಲಿ ಬೆರಗನ್ನೂ, ಬೆಡಗನ್ನೂ ಇಟ್ಟ ಆ ಭಗವಂತನ ಮರ್ಮವಾದರೂ ಏನಿರಬಹುದು?
ಕೆಳಗಿನ ಕೊಂಡಿ ಕ್ಲಿಕ್ಕಿಸಿ, ನೋಡಿ ಕಾಂಗರೂ ನಾಡಿನ ಬೆಡಗನ್ನು.
Advertisements