ಭಾರತೀಯ ಮುಸ್ಲಿಂ ಮತ್ತು ದೇಶ ಪ್ರೇಮದ ಸರ್ಟಿಫಿಕೇಟಿನ ಅನಿವಾರ್ಯತೆ

ನೆನಪಿನ ಸಂಚಿ

induian muslim

“ಭಾರತೀಯ ಮುಸ್ಲಿಮರು ದೇಶಕ್ಕಾಗಿ ಬದುಕುತ್ತಾರೆ ದೇಶಕ್ಕಾಗಿ ಪ್ರಾಣ ಕೊಡುತ್ತಾರೆ “. ನಮ್ಮ ಘನವೆತ್ತ ಪ್ರಧಾನ ಮಂತ್ರಿಯ ಉಚ್ಚಿಷ್ಠ ಉವಾಚವಿದು. ನಮ್ಮ ಪ್ರಧಾನಿಯಿಂದ ಇಂಥದ್ದೊಂದು ಸರ್ಟಿಫಿಕೇಟ್ ಪಡೆಯುವ ಅವಶ್ಯಕತೆ ಬಂದೊದಗಿದ್ದು ಭಾರತೀಯ ಮುಸ್ಲಿಮನ ಪಾಲಿಗೆ ಬಹು ನೋವಿನ ಸಂಗತಿ.

ಭಯೋತ್ಪಾದಕ, ಮೂಲಭೂತವಾದಿ, ದೇಶದ್ರೋಹಿ, ಹೇಗೆಲ್ಲಾ ಹೀಗಳೆದು ಸಮಾಜದ ಮುಖ್ಯವಾಹಿನಿಯಿಂದ ಒಂದಿಷ್ಟು ಅಂತರ ಕಾಯುವಂತೆ ಮಾಡಿ, ಹುಟ್ಟಿ ಬಿದ್ದ ಮಣ್ಣಿನಲ್ಲಿ ದ್ವಿತೀಯ ದರ್ಜೆಯ ಪ್ರಜೆಗಳನ್ನಾಗಿಸಿದರೂ, ಸ್ವತಂತ್ರಾ ನಂತರ ಬಂದೊದಗಿದ ಕೋಮುಗಲಭೆಯ ಕಂಟಕಗಳು, ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಹಿಂದುಳಿದು ‘ನವ ದಲಿತರು’ ಎಂದು ಕರೆಯಲ್ಪಟ್ಟರೂ ಭಾರತೀಯ ಮುಸ್ಲಿಂ ತನ್ನೆಲ್ಲ ನೋವನ್ನು ಸಮಯದ ಭೂ ಗರ್ಭದಲಿ ಅರಗಿಸಿಕೊಂಡು ಮುನ್ನಡೆಯುತ್ತಿದ್ದಾನೆ.

ಶಹೀದೆ ಮಿಲ್ಲತ್ ಟಿಪ್ಪು ಸುಲ್ತಾನ್, ಹೈದರಾಲಿ, ಮೌಲಾನಾ ಶೌಕತ್ ಅಲಿ, ಖಾನ್ ಅಬ್ದುಲ್ ಗಫಾರ್ ಖಾನ್, ಡಾ।ಮಗ್ಫೂರ್ ಅಹ್ಮದ್ ಅಜಾಝಿ, ಮೌಲಾನಾ ಮಂಝುರ್ ಅಹ್ಸನ್ ಅಜಾಝಿ, ಅಲಿ ಆಸೀಫ್,ಮೊಹಮ್ಮದ್ ಜೌಹರ್,ಅಲಿ ಇನಾಯತ್, ಶಹೀದ್ ಫೀರ್ ಅಲಿ, ವಲಯತ್ ಅಲಿ, ಅಲಿ ವಾರಿಸ್, ಅಬ್ದುಲ್ ಖಯ್ಯೂಮ್ ಅನ್ಸಾರಿ, ಮೌಲಾನಾ ಅಬ್ದುಲ್ ಕಲಾಂ ಅಝಾದ್, ಹಕೀಮ್ ಅಜ್ಮಲ್ ಖಾನ್, ಅಶ್ಫಾಕುಲ್ಲಾಹ್ ಖಾನ್, ಬೇಗಮ್ ಹಜ್ರತ್ ಮಹಲ್,ಮೌಲಾನಾ ಹುಸೈನ್ ಅಹ್ಮದ್, ರಫಿ ಅಹ್ಮದ್ ಕಿದ್ವಾಯಿ ಹಾಗು ಇನ್ನು ಹಲವಾರು ಮುಸ್ಲಿಂ ಧಾರ್ಮಿಕ ಮತ್ತು ಸಾಮುದಾಯಿಕ ನಾಯಕರು ಭಾರತ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದ ಮುಖ್ಯ ಭೂಮಿಕೆಯಲ್ಲಿದ್ದರು. ಇವರ ದೇಶ ಪ್ರೇಮವು ಪ್ರಶ್ನಾತೀತವಾಗಿರುವಗಲೇ, ಪ್ರಸ್ತುತ ಭಾರತೀಯ ಮುಸ್ಲಿಮರು ದೇಶ ಪ್ರೇಮವನ್ನು,ದೇಶನಿಷ್ಠೆಯನ್ನು ಪ್ರತೀ ದಿನ ಸಾಬೀತುಪಡಿಸಬೇಕಾದ ಅನಿವಾರ್ಯತೆಗೆ ಒಳಗಾಗಿದ್ದಾನೆ.

ಅಷ್ಟಕ್ಕೂ ಮುಸ್ಲಿಮರ ದೇಶಪ್ರೇಮವು ಪ್ರಧಾನಿಯಿಂದ…

View original post 367 more words

ಪ್ರೇಮದ ಕಾದಂಬರಿ, ಬರೆದೇ ನಾ….

waveloveimage

ಈ ಬರಹದ ಶೀರ್ಷಿಕೆಯ ಸಾಲನ್ನು ಓದಿದ ಕೂಡಲೇ ನೆನಪು ದಶಕಗಳ ಹಿಂದೆ ಓಡುತ್ತದೆ ಅಲ್ಲವೇ?

ಪ್ರೇಮದಾ ಕಾದಂಬರಿ, ಬರೆದೆ ನಾ ಕಣ್ಣೀರಲಿ,
ಕಥೆಯು ಮುಗಿದೇ ಹೋದರೂ
ಮುಗಿಯದಿರಲೀ ಬಂಧನಾ…

ಬರಹದೊಂದಿಗೆ ಸೇರಿಸಿದ ಚಿತ್ರ ನೋಡುತ್ತಲೇ ಈ ಹಾಡು ನೆನಪಾಯಿತು. ಚಿತ್ರದಲ್ಲಿ ಕಡಲ ತೆರೆಯು ಸೃಷ್ಟಿಸಿದ ಈ ಪ್ರೇಮದ ಸಂಕೇತ ಎಷ್ಟು ಚೆನ್ನಾಗಿ ಮೂಡಿ ಬಂದಿದೆ ನೋಡಿ..