ಮಹಾಕಾವ್ಯ ಮಹಾಭಾರತವನ್ನು ವಿಮರ್ಶಿಸಿ ಒಬ್ಬರು ಲೇಖನದ ಬರೆದರು. ಅದರಲ್ಲಿ ಮಹಾಭಾರತ ವನ್ನು ಸ್ವಲ್ಪ ಕಟುವಾಗಿ ಟೀಕಿಸಲಾಗಿತ್ತು. ಓದಿದ ಒಬ್ಬರು ಈ ಲೇಖನಕ್ಕೆ ಪ್ರತಿಕ್ರಯಿಸಿದ್ದು ಹೀಗೆ.
“ಯಾವುದೋ ಕಾಲದ ಪುರಾಣದ ಕತೆಗಳನ್ನು ತೆಗೆದುಕೊಂಡು, ನಮ್ಮ ಮನಸಿಗೆ ಕಾಣುವುದೆ ಸತ್ಯವೆಂದು ನಿರ್ದರಿಸಿ, (ನಾವು ಯಾರು ಆಗಿನ ಕಾಲಕ್ಕೆ ಹೋಗಿ ಸತ್ಯವೇನೆಂದು ಅರಿಯಲಾರೆವು, ಏನು ನಡೆಯಿತೆಂದು ತಿಳಿಯಲಾರೆವು), ಈಗಿನ ವಾತವರಣ ಕಲುಶಿತಗೊಳಿಸುತ್ತ ಹೋಗುವ ಅರ್ಥವಾದರು ಏನು . ನಿಮಗೆ ಕೃಷ್ಣ ರಾಮರು ಬೇಡ ಬಿಡಿ. ಆದರೆ ಯಾವುದು ಸತ್ಯ ತಿಳಿಸಿ, ಅದನ್ನೆ ಎಲ್ಲರಿಗು ಹೇಳಿ, ನಿಮ್ಮ ದಾರಿಗೆ ಕರೆದೊಯ್ಯಿರಿ, ಆದರೆ ಯಾವುದನ್ನೊ ನಿಂದಿಸುತ್ತ, ಅವರ ನಂಭಿಕೆಯನ್ನು ದ್ವೇಶಿಸುತ್ತ ಇದ್ದಲ್ಲಿ, ಅವರು ನಿಮ್ಮ ಭಾವನೆಗಳನ್ನು ಹೇಗೆ ಗೌರವಿಸುತ್ತಾರೆ. ದ್ವೇಶದಿಂದ ದ್ವೇಶವೆ ಹುಟ್ಟುತ್ತದೆ, ನಿಂದನೆಯಿಂದ ನಿಂದನೆಯಿ ಹುಟ್ಟುತ್ತದೆ, ಮತ್ತೆ ಕಡೆಯದಾಗಿ ಪ್ರೀತಿಯಿಂದ ಪ್ರೀತಿಯೆ ಹುಟ್ಟುತ್ತದೆ.”
ಸತ್ಯವಾದ ಮಾತುಗಳು. ಹಳೆಕಾಲದ ರಾಜರ ಪ್ರಮಾದಗಳನ್ನು ಇತಿಹಾಸ ಎಂದು ವಿಷ ಸೇರಿಸಿ ವಿಕೃತ ಇದೇ ಇತಿಹಾಸ ಎಂದು ಸುಖ ಕಾಣುವ ‘ಇತಿಹಾಸ್ಯ’ ಕಾರರು, ಆ ಇತಿಹಾಸ್ಯ ಓದಿ ಇಂದಿನ ಪೀಳಿಗೆಯವರನ್ನು ಗೋಳು ಹೊಯ್ದು ಕೊಳ್ಳುವ ತರಲೆಗಳು, ಪತ್ರಿಕಾ ಧರ್ಮದ ಗಂಧ ಗಾಳಿಯಿಲ್ಲದೆ ಧ್ವೇಷ ತುಂಬಿದ ಲೇಖನಗಳನ್ನು ರಚಿಸುವ ‘ಪೋಸ್ಟರ್ ಬಾಯ್’ ಗಳು ತಮ್ಮ ಮನಸ್ಸು ಮತಿಯ ಮೇಲೆ ಅಚ್ಚೊತ್ತ ಬೇಕಾದ ಮಾತುಗಳು ಮೇಲಿನವು.
…….ಇದ್ದಿದ್ದ ‘ರೆ’? ಈ ತಲೆಬರಹದ ‘ರೆ’ ಬರೀ ಆಶಯವಾಗಿರದೆ ‘ಖರೆ’ಯಾದರೆ ನಮ್ಮ ದೇಶ ಇನ್ನೂ ಚೆಂದ.